Don't Miss

Monthly Archives: January 2024

‘ಹೆಚ್ಚು ಹಳದಿ’ಯಾಗಿರುವ ಅರಿಶಿನವು ಸೀಸದ ಕ್ರೋಮೇಟ್ ಅನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವು ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿರುವ ‘ಹೆಚ್ಚು ಹಳದಿಯಾಗಿರುವ’ ಅರಿಶಿನವು ಸೀಸದ ಕ್ರೋಮೇಟ್ ಪುಡಿಯನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion: ಅರಿಶಿನವು ಹೆಚ್ಚು ಹಳದಿಯಾಗಿ ಕಾಣುವಂತೆ ಮಾಡಲು ಅದರಲ್ಲಿ ಸೀಸದ ಕ್ರೋಮೇಟ್ ಅನ್ನು ಬಳಸಲಾಗುತ್ತದೆ. ಅರಿಶಿನದಲ್ಲಿ ಸೀಸದ ಕ್ರೋಮೇಟ್ ಇರಬಾರದು ಎಂದು FSSAI ಹೇಳಿದೆ. ಅಷ್ಟೇ ಅಲ್ಲದೆ, ಅರಿಶಿನದಲ್ಲಿ ಕಲಬೆರಕೆಯನ್ನು ಪರೀಕ್ಷಿಸಲು ಜನರು ತಮ್ಮ ಮನೆಗಳಲ್ಲಿ ನಡೆಸಬಹುದಾದ ಸರಳ ಪರೀಕ್ಷೆಗಳನ್ನು ಸಹ ಸಂಸ್ಥೆಯು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಪ್ರಮಾಣೀಕೃತ ಮತ್ತು ಅಧಿಕೃತ ಮಾರಾಟಗಾರರಿಂದ ಅರಿಶಿನವನ್ನು ಖರೀದಿಸಲು ಸಲಹೆ ನೀಡಲಾಗಿದೆ. ರೇಟಿಂಗ್: ನಿಜ — ಸತ್ಯ ಪರಿಶೀಲನೆ ವಿವರಗಳು ...

Read More »

ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿದೆಯೇ? ಹಳೆಯ ಹೇಳಿಕೆಯ ಮರುಕಳಿಕೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion:ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೇಂದ್ರ ಸರ್ಕಾರವು ಈವರೆಗೆ ತಮ್ಮ ಯಾವುದೇ ಯೋಜನೆಯಡಿಯಲ್ಲಿ ಇಂತಹ ಯಾವುದೇ ಸ್ಕೀಮನ್ನು ಪ್ರಾರಂಭಿಸಿಲ್ಲ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು. ಸತ್ಯ ಪರಿಶೀಲನೆ ವಿವರಗಳು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರವು ಉಚಿತ ಯೋಜನೆಯನ್ನು ಪ್ರಾರಂಭಿಸಿದೆ ಎಂದು ವೈರಲ್ ಸಂದೇಶವು ಹೇಳುತ್ತದೆ. ವೈರಲ್ ಸಂದೇಶವು ಹೀಗಿದೆ: ...

Read More »

ತಮಿಳುನಾಡಿನಲ್ಲಿ BHEL ತಿರುಚ್ಚಿ ಘಟಕವು ರಾಮ ಮಂದಿರಕ್ಕಾಗಿ ಈ ಬೃಹತ್ ಗಂಟೆಗಳನ್ನು ತಯಾರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ತಮಿಳುನಾಡಿನ ತಿರುಚ್ಚಿಯಲ್ಲಿರುವ BHEL ಘಟಕವು ರಾಮಮಂದಿರಕ್ಕಾಗಿ ಬೃಹತ್ ಗಂಟೆಗಳನ್ನು ತಯಾರಿಸಿದೆ. ಕಡೆನುಡಿ/Conclusion: ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಮೋಹನೂರ್ ರಸ್ತೆಯಲ್ಲಿರುವ ಆಂಡಾಲ್ ಮೋಲ್ಡಿಂಗ್ ವರ್ಕ್ಸ್ ಈ  ಗಂಟೆಗಳನ್ನು ತಯಾರಿಸಿದೆ ಮತ್ತು ಹೇಳಿಕೆಯಲ್ಲಿರುವಂತೆ BHEL, ತಿರುಚ್ಚಿ ಇವುಗಳನ್ನು ತಯಾರಿಸಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಒಂದು ಟ್ರಕ್ ದೊಡ್ಡದಾದ ದೇವಾಲಯದ ಗಂಟೆಗಳನ್ನು ಸಾಗಿಸುತ್ತಿರುವ ವೀಡಿಯೊವನ್ನು ಹೊಂದಿರುವ ಒಂದು ವೀಡಿಯೊ ವೈರಲ್ ಆಗುತ್ತಿದೆ.  ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಈ ಗಂಟೆಗಳನ್ನು ತಯಾರಿಸಿದೆ ಎಂಬುದು ಅದರೊಂದಿಗಿರುವ ಹೇಳಿಕೆ. ಹೇಳಿಕೆಯ ಅನುಸಾರ: “ಅಯೋಧ್ಯಾಧಾಮಕ್ಕೆ (ರಾಮ ಮಂದಿರ) ರವಾನೆಯಾಗುತ್ತಿರುವ ಈ ಗಂಟೆಗಳನ್ನು ಅಯೋಧ್ಯಾ ಮಂದಿರಕ್ಕಾಗಿ BHEL ತಿರುಚ್ಚಿಯು  ತಯಾರಿಸಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಿರಿ ಮತ್ತು ಅದನ್ನು ಭಕ್ತರಾಗಿ ಹಂಚಿಕೊಳ್ಳಿ. भारत हैवी इलेक्ट्रिकल्स, त्रिचुरापल्ली में निर्माण कर अयोध्या मंदिर को भेजे जा रहे हैं ये सभी घंटे जय श्री राम लिख कर शेयर करें (ಅನುವಾದ ಹೀಗಿದೆ: ಈ ಎಲ್ಲಾ ಗಂಟೆಗಳನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ತಿರುಚಿರಾಪಳ್ಳಿಯಲ್ಲಿ ನಿರ್ಮಾಣ ಮಾಡಿ ಅಯೋಧ್ಯೆ ದೇವಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ಜೈ ಶ್ರೀ ರಾಮ್ ಎಂದು ಬರೆದು ಹಂಚಿಕೊಳ್ಳಿ). FACT CHECK BHEL ಸಾರ್ವಜನಿಕ ವಲಯದ ಉದ್ಯಮ (PSU) ಆಗಿರುವುದರಿಂದ ಮತ್ತು ಯಾವುದೇ ಸುದ್ದಿವಾಹಿನಿಗಳಲ್ಲಿ ಇಂತಹ ಯಾವುದೇ ವರದಿ  ಪ್ರಕಟವಾಗದ್ದರಿಂದ ಡಿಜಿಟೈ ಇಂಡಿಯಾ ತಂಡವು ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡಿತು. ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕೀ ...

Read More »

ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 हजार हवन कुंडो से होगा ...

Read More »

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ  ಜಾಲತಾಣದ ಒಂದು ಪೋಸ್ಟ್‌ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದರಿಂದ ತಮ್ಮ ಪಡಿತರ ಚೀಟಿಗಳು ಚಾಲ್ತಿಯಲ್ಲಿರುವ ...

Read More »

ಸತ್ಯ ಪರಿಶೀಲನೆ: ಕೇರಳದಲ್ಲಿ ಹಣ ಸುಲಿಗೆಯ ನಾಟಕೀಯ ವೀಡಿಯೊ ಸುಳ್ಳು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ಹೇಳಿಕೆ/Claim:ಕೇರಳದಲ್ಲಿ ಹಣ ವಸೂಲಿಯ ನಾಟಕೀಯ ವೀಡಿಯೊವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion:ಡಿಸೆಂಬರ್ 26ರಂದು ಸುಜಿತ್ ರಾಮಚಂದ್ರನ್ ಎಂಬ ಬಳಕೆದಾರರು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಕೆದಾರರು ವೀಡಿಯೊದ ಪಾತ್ರಗಳನ್ನು ಉಲ್ಲೇಖಿಸಿದರು. ಅವರು ನಂತರ, ವೀಡಿಯೊವನ್ನು ಸಂಪೂರ್ಣವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರೀಕರಿಸಲಾಗಿದೆ ಎಂಬ ಒಂದು ಹಕ್ಕು ನಿರಾಕರಣೆಯನ್ನೂ ಸೇರಿಸಿದ್ದರು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಗಂಡಸರ ಗುಂಪೊಂದು ಕಾರಿನಲ್ಲಿ ಒಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಕೋಮುವಾದಿ  ಹೇಳಿಕೆಗಳೊಂದಿಗೆ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಕೇರಳದಲ್ಲಿ ಸೆರೆಹಿಡಿಯಲಾಗಿದೆ ಮತ್ತು ತಮ್ಮ ಕ್ರಿಸ್ಮಸ್ ...

Read More »

ರತನ್ ಟಾಟಾರವರು ಇತ್ತೀಚೆಗೆ ಗುಂಡು ತಡೆದುಕೊಳ್ಳುವ ಮತ್ತು ಬಾಂಬ್ ತಡೆದುಕೊಳ್ಳುವ ಬಸ್ಸುಗಳನ್ನು ಭಾರತೀಯ ಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟಾಟಾ ಗ್ರೂಪ್ ಅಧ್ಯಕ್ಷರಾದ ರತನ್ ಟಾಟಾರವರು ಇತ್ತೀಚೆಗೆ ಭಾರತೀಯ ಸೇನೆಗೆ ಗುಂಡು ತಡೆದುಕೊಳ್ಳುವಂತಹ ಮತ್ತು ಬಾಂಬ್ ತಡೆದುಕೊಳ್ಳುವಂತಹ ಬಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಡೆನುಡಿ/Conclusion:ಸುಳ್ಳು. ಈ ಬಸ್‌ಗಳನ್ನು ಮಿಶ್ರಾ ಧಾತು ನಿಗಮ್ ಲಿಮಿಟೆಡ್ (MIDHANI) 2017 ರಲ್ಲಿ CRPF ಗೆ ನೀಡಿತ್ತು. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಟಾಟಾ ಗ್ರೂಪ್‌ನ ಅಧ್ಯಕ್ಷರಾದ ರತನ್ ಟಾಟಾರವರ ಚಿತ್ರ ಮತ್ತು ಅದರೊಂದಿಗೆ ಒಂದು ಶಸ್ತ್ರಸಜ್ಜಿತ ಬಸ್ಸಿನ  ಮತ್ತೊಂದು ಚಿತ್ರವನ್ನು ತೋರಿಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿದೆ. ತನ್ನ ಪರೋಪಕಾರಿ ಚಟುವಟಿಕೆಗಳಿಗಾಗಿ ಹೆಸರುವಾಸಿಯಾದ ಈ ...

Read More »

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion:  ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕ್ರೈಸ್ತ ಪಾದ್ರಿಯ ಮುಂದೆ ಕುಳಿತಿರುವ ಚಿತ್ರವೊಂದು ...

Read More »

ಕರೋನವೈರಸ್ ಅನ್ನು ಪತ್ತೆಹಚ್ಚುವುದು ಹೇಗೆ ಎಂಬುದರ ಕುರಿತು AIIMS ಹೇಳಿಕೆ ನೀಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೋವಿಡ್-19ನ್ನು ಪತ್ತೆಹಚ್ಚುವ ರೋಗಲಕ್ಷಣಗಳ ಪಟ್ಟಿಯನ್ನು ಹೊಂದಿರುವ ಹೊಸ ಸಲಹೆಯನ್ನು AIIMS ಬಿಡುಗಡೆ ಮಾಡಿದೆ. ಕಡೆನುಡಿ/Conclusion: AIIMSನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಸಾಮಾನ್ಯ ನೆಗಡಿ, ಪ್ಲು ಮತ್ತು ವೈರಲ್ ಜ್ವರದ ಲಕ್ಷಣಗಳು ಕೋವಿಡ್-19ರ ಲಕ್ಷಣಗಳನ್ನು ಹೋಲಬಹುದು. ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ರೇಟಿಂಗ್:  ದಾರಿತಪ್ಪಿಸುವ ಸುದ್ದಿ  ಸತ್ಯ ಪರಿಶೀಲನೆ ವಿವರಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (AIIMS) ಕೋವಿಡ್-19 ಅನ್ನು ಪತ್ತೆಹಚ್ಚಲು ಹೊಸ ರೋಗಲಕ್ಷಣಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ...

Read More »

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಪ್ರಯಾಣಿಕರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತಯಾರಿಸಲಾದ ವೀಡಿಯೊ ತೋರಿಸುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್‌ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್‌ನಲ್ಲಿ ಬಳಕೆದಾರರಿಂದ  ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ ನೀಡುತ್ತದೆ. Airport se Safar karne ...

Read More »