ಮುಸ್ಲಿಂ ವಿದ್ಯಾರ್ಥಿಗಳು ನಮಾಜ್ ಮಾಡಲು ಅನುವು ಮಾಡಿಕೊಡಲು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಶುಕ್ರವಾರ ಮಧ್ಯಾಹ್ನ ನಿಗದಿಪಡಿಸಲಾಗಿದೆಯೇ? ಸತ್ಯ ಪರಿಶೀಲನೆ

ಮುಸ್ಲಿಂ ವಿದ್ಯಾರ್ಥಿಗಳು ನಮಾಜ್ ಮಾಡಲು ಅನುವು ಮಾಡಿಕೊಡಲು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಶುಕ್ರವಾರ ಮಧ್ಯಾಹ್ನ ನಿಗದಿಪಡಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಶುಕ್ರವಾರದಂದು ಮುಸ್ಲಿಂ ವಿದ್ಯಾರ್ಥಿಗಳು ನಮಾಜ್ ಮಾಡಲು ಸಹಾಯವಾಗುವಂತೆ ಮಾರ್ಚ್ 1 ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಧ್ಯಾಹ್ನ ನಿಗದಿಪಡಿಸಲಾಗಿದೆ.

ಕಡೆನುಡಿ/Conclusion: ಸುಳ್ಳು. ಮಾರ್ಚ್ 1, 2024 ರ ಶುಕ್ರವಾರದಂದು ಬೆಳಿಗ್ಗೆ ಪಿಯುಸಿ ಪರೀಕ್ಷೆ ಮತ್ತು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುವಂತೆ ವೇಳಾಪಟ್ಟಿಯನ್ನು ವಿನ್ಯಾಸಗೊಳಿಸಲಾಗಿದೆ.

ರೇಟಿಂಗ್:ತಪ್ಪು ನಿರೂಪಣೆ —

ಸತ್ಯ ಪರಿಶೀಲನೆ ವಿವರಗಳು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (ಕೆಎಸ್‌ಇಎಬಿ) ಫೆಬ್ರವರಿ 2 ರಂದು 10 ನೇ ತರಗತಿಯ ಪೂರ್ವಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಶುಕ್ರವಾರ ಬೆಳಿಗ್ಗೆ ಪರೀಕ್ಷೆಯನ್ನು ನಡೆಸದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಣೆಗಳು ಭುಗಿಲೆದ್ದವು, ಇದು ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಸರ್ಕಾರದ ಕೈಗೊಂಡ ಕ್ರಮ ಎಂದು ಬಣ್ಣಿಸಲಾಯಿತು.

ಅಂತಹ ಒಂದು ಟ್ವೀಟ್‌ನ ಶೀರ್ಷಿಕೆ ಹೀಗಿದೆ: “ಕರ್ನಾಟಕ ರಾಜ್ಯ 10 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗಿನ ವೇಳೆ, ಶುಕ್ರವಾರದ ಹೊರತು. ಯಾಕೆ? ಓಹ್.. ನಮಾಜ್‌ಗೆ ಸಮಯ?” ಚಕ್ರವರ್ತಿ ಸೂಲಿಬೆಲೆಯವರ ಈ ಟ್ವೀಟ್ ಅನ್ನು ಒಂದೇ ದಿನದಲ್ಲಿ 3 ಲಕ್ಷಕ್ಕೂ ಹೆಚ್ಚು ಬಾರಿ ನೋಡಲಾಗಿದೆ.

ಇದೇ ಟ್ವೀಟ್ ಅನ್ನು ಇಲ್ಲಿ ಮತ್ತು ಇಲ್ಲಿ ವಿಭಿನ್ನ ಶೀರ್ಷಿಕೆಗಳೊಂದಿಗೆ ಹಂಚಿಕೊಳ್ಳಲಾಗಿದೆ.

FACT CHECK

ಡಿಜಿಟೈ ಇಂಡಿಯಾ ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡು ವೇಳಾಪಟ್ಟಿಯನ್ನು ಹುಡುಕಿತು. ಈ ಕುರಿತು ಪ್ರತಿಕ್ರಿಯಿಸಿರುವ ಐಎನ್‌ಸಿ ಕರ್ನಾಟಕ ಹೇಳಿರುವುದು ಹೀಗೆ: “ಮಾರ್ಚ್ ಮೊದಲ ದಿನದಂದು, ಪಿಯುಸಿ (ಪದವಿಪೂರ್ವ) ಪರೀಕ್ಷೆಗಳು ಪ್ರಾರಂಭವಾಗುವ ಕಾರಣ ಎಸ್‌ಎಸ್‌ಎಲ್‌ಸಿ (ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುವುದು. ಮುಂದಿನ ದಿನಗಳಂದು ಪಿಯುಸಿ ಪರೀಕ್ಷೆಯು ಇಲ್ಲದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಬೆಳಗ್ಗೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳ ಕೊರತೆ ಮತ್ತು ಅವ್ಯವಸ್ಥೆಯನ್ನು ತಪ್ಪಿಸಲು ಈ ಕಾರ್ಯವಿಧಾನವು ಜಾರಿಯಲ್ಲಿದೆ…”


ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ಸಮಯದ ಹಿಂದಿನ ತರ್ಕವನ್ನು ಸ್ಥಾಪಿಸಲಾಗಿದೆ ಎಂದು ಕರ್ನಾಟಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಹೇಳಿಕೆಗಳಿಗೆ ಪ್ರತಿಕ್ರಿಯಿಸಿದರು. ಮಾರ್ಚ್ 1, 2024 ರಂದು 12ನೇ ತರಗತಿ (ಪಿಯುಸಿ) ಪರೀಕ್ಷೆಯನ್ನು ಬೆಳಿಗ್ಗೆ ನಿಗದಿಪಡಿಸಿ, 10ನೇ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಪಡಿಸಲಾಗಿತ್ತು.

10 ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಇನ್ನಷ್ಟು ಪರಿಶೀಲಿಸಿದಾಗ, ಮಾರ್ಚ್ 8 ರಂದು ಮಹಾ ಶಿವರಾತ್ರಿಯಾಗಿದ್ದು (ಹಿಂದೂ ಹಬ್ಬ), ಆ ದಿನ ಯಾವುದೇ ಪರೀಕ್ಷೆಯನ್ನು ನಿಗದಿಪಡಿಸಲಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಮಾರ್ಚ್ 1 ರಂದು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಎರಡೂ ಪರೀಕ್ಷೆಗಳು ನಡೆಯುತ್ತಿರುವುದರಿಂದ ಈ ಪರೀಕ್ಷೆಗಳನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನ ನಿಗದಿಪಡಿಸಲಾಗಿದೆ.

ಅಷ್ಟೇ ಅಲ್ಲದೆ, ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಶುಕ್ರವಾರ, ಮಾರ್ಚ್ 15 ಮತ್ತು ಶುಕ್ರವಾರ, ಮಾರ್ಚ್ 22 ರಂದು ಬೆಳಗ್ಗಿನ ಸಮಯದಲ್ಲಿ  ನಿಗದಿಪಡಿಸಲಾಗಿದೆ. ಈ ಅಂಶವು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ತೃಪ್ತಿಪಡಿಸಲು ನಮಾಜ್ ಮಾಡಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಮಧ್ಯಾಹ್ನ ಇಡಲಾಗಿದೆ ಎಂಬ ಆರೋಪದ ಹಿಂದಿನ ಮೂಲ ತರ್ಕವನ್ನು ಅಲ್ಲಗಳೆಯುತ್ತದೆ.

ಹಾಗಾಗಿ, ಮಾರ್ಚ್ 1ರ ಶುಕ್ರವಾರದಂದು ಪೂರ್ವಸಿದ್ಧತಾ ಹಂತದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಮಯವನ್ನು  ಪ್ರಾರ್ಥನೆಗೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೊಂದಿಸಲಾಗಿದೆ ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ:

ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ತೋರಿಸುವುದಾಗಿ ಹೇಳುವ ವೈರಲ್ ವೀಡಿಯೊ; ಸತ್ಯ ಪರಿಶೀಲನೆ

ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿದೆಯೇ? ಹಳೆಯ ಹೇಳಿಕೆಯ ಮರುಕಳಿಕೆ; ಸತ್ಯ ಪರಿಶೀಲನೆ

Leave a Reply

Your email address will not be published.