ಹೇಳಿಕೆ/Claim: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್ಟಾಪ್ಗಳನ್ನು ನೀಡುತ್ತಿದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion:ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೇಂದ್ರ ಸರ್ಕಾರವು ಈವರೆಗೆ ತಮ್ಮ ಯಾವುದೇ ಯೋಜನೆಯಡಿಯಲ್ಲಿ ಇಂತಹ ಯಾವುದೇ ಸ್ಕೀಮನ್ನು ಪ್ರಾರಂಭಿಸಿಲ್ಲ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು. ಸತ್ಯ ಪರಿಶೀಲನೆ ವಿವರಗಳು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರವು ಉಚಿತ ಯೋಜನೆಯನ್ನು ಪ್ರಾರಂಭಿಸಿದೆ ಎಂದು ವೈರಲ್ […]
ಹೇಳಿಕೆ/Claim:ತಮಿಳುನಾಡಿನ ತಿರುಚ್ಚಿಯಲ್ಲಿರುವ BHEL ಘಟಕವು ರಾಮಮಂದಿರಕ್ಕಾಗಿ ಬೃಹತ್ ಗಂಟೆಗಳನ್ನು ತಯಾರಿಸಿದೆ. ಕಡೆನುಡಿ/Conclusion: ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಮೋಹನೂರ್ ರಸ್ತೆಯಲ್ಲಿರುವ ಆಂಡಾಲ್ ಮೋಲ್ಡಿಂಗ್ ವರ್ಕ್ಸ್ ಈ ಗಂಟೆಗಳನ್ನು ತಯಾರಿಸಿದೆ ಮತ್ತು ಹೇಳಿಕೆಯಲ್ಲಿರುವಂತೆ BHEL, ತಿರುಚ್ಚಿ ಇವುಗಳನ್ನು ತಯಾರಿಸಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಒಂದು ಟ್ರಕ್ ದೊಡ್ಡದಾದ ದೇವಾಲಯದ ಗಂಟೆಗಳನ್ನು ಸಾಗಿಸುತ್ತಿರುವ ವೀಡಿಯೊವನ್ನು ಹೊಂದಿರುವ ಒಂದು ವೀಡಿಯೊ ವೈರಲ್ ಆಗುತ್ತಿದೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಈ ಗಂಟೆಗಳನ್ನು ತಯಾರಿಸಿದೆ ಎಂಬುದು ಅದರೊಂದಿಗಿರುವ ಹೇಳಿಕೆ. ಹೇಳಿಕೆಯ ಅನುಸಾರ: “ಅಯೋಧ್ಯಾಧಾಮಕ್ಕೆ (ರಾಮ ಮಂದಿರ) ರವಾನೆಯಾಗುತ್ತಿರುವ ಈ ಗಂಟೆಗಳನ್ನು ಅಯೋಧ್ಯಾ ಮಂದಿರಕ್ಕಾಗಿ BHEL ತಿರುಚ್ಚಿಯು ತಯಾರಿಸಿದೆ. ಕಾಮೆಂಟ್ ಬಾಕ್ಸ್ನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಿರಿ ಮತ್ತು ಅದನ್ನು ಭಕ್ತರಾಗಿ ಹಂಚಿಕೊಳ್ಳಿ. भारत हैवी इलेक्ट्रिकल्स, त्रिचुरापल्ली में निर्माण कर अयोध्या मंदिर को भेजे जा रहे हैं ये सभी घंटे जय श्री राम लिख कर शेयर करें (ಅನುವಾದ ಹೀಗಿದೆ: ಈ ಎಲ್ಲಾ ಗಂಟೆಗಳನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ತಿರುಚಿರಾಪಳ್ಳಿಯಲ್ಲಿ ನಿರ್ಮಾಣ ಮಾಡಿ ಅಯೋಧ್ಯೆ ದೇವಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ಜೈ ಶ್ರೀ ರಾಮ್ ಎಂದು ಬರೆದು ಹಂಚಿಕೊಳ್ಳಿ). FACT CHECK BHEL ಸಾರ್ವಜನಿಕ ವಲಯದ ಉದ್ಯಮ (PSU) ಆಗಿರುವುದರಿಂದ ಮತ್ತು ಯಾವುದೇ ಸುದ್ದಿವಾಹಿನಿಗಳಲ್ಲಿ ಇಂತಹ ಯಾವುದೇ ವರದಿ ಪ್ರಕಟವಾಗದ್ದರಿಂದ ಡಿಜಿಟೈ ಇಂಡಿಯಾ ತಂಡವು ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡಿತು. […]
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]
ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ ಜಾಲತಾಣದ ಒಂದು ಪೋಸ್ಟ್ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು […]
ಹೇಳಿಕೆ/Claim:ಕೇರಳದಲ್ಲಿ ಹಣ ವಸೂಲಿಯ ನಾಟಕೀಯ ವೀಡಿಯೊವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion:ಡಿಸೆಂಬರ್ 26ರಂದು ಸುಜಿತ್ ರಾಮಚಂದ್ರನ್ ಎಂಬ ಬಳಕೆದಾರರು ಫೇಸ್ಬುಕ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಕೆದಾರರು ವೀಡಿಯೊದ ಪಾತ್ರಗಳನ್ನು ಉಲ್ಲೇಖಿಸಿದರು. ಅವರು ನಂತರ, ವೀಡಿಯೊವನ್ನು ಸಂಪೂರ್ಣವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರೀಕರಿಸಲಾಗಿದೆ ಎಂಬ ಒಂದು ಹಕ್ಕು ನಿರಾಕರಣೆಯನ್ನೂ ಸೇರಿಸಿದ್ದರು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಗಂಡಸರ ಗುಂಪೊಂದು ಕಾರಿನಲ್ಲಿ ಒಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು […]
ಹೇಳಿಕೆ/Claim: ಟಾಟಾ ಗ್ರೂಪ್ ಅಧ್ಯಕ್ಷರಾದ ರತನ್ ಟಾಟಾರವರು ಇತ್ತೀಚೆಗೆ ಭಾರತೀಯ ಸೇನೆಗೆ ಗುಂಡು ತಡೆದುಕೊಳ್ಳುವಂತಹ ಮತ್ತು ಬಾಂಬ್ ತಡೆದುಕೊಳ್ಳುವಂತಹ ಬಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಡೆನುಡಿ/Conclusion:ಸುಳ್ಳು. ಈ ಬಸ್ಗಳನ್ನು ಮಿಶ್ರಾ ಧಾತು ನಿಗಮ್ ಲಿಮಿಟೆಡ್ (MIDHANI) 2017 ರಲ್ಲಿ CRPF ಗೆ ನೀಡಿತ್ತು. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಟಾಟಾ ಗ್ರೂಪ್ನ ಅಧ್ಯಕ್ಷರಾದ ರತನ್ ಟಾಟಾರವರ ಚಿತ್ರ ಮತ್ತು ಅದರೊಂದಿಗೆ ಒಂದು ಶಸ್ತ್ರಸಜ್ಜಿತ ಬಸ್ಸಿನ ಮತ್ತೊಂದು ಚಿತ್ರವನ್ನು ತೋರಿಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿದೆ. […]
ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ […]
ಹೇಳಿಕೆ/Claim: ಕೋವಿಡ್-19ನ್ನು ಪತ್ತೆಹಚ್ಚುವ ರೋಗಲಕ್ಷಣಗಳ ಪಟ್ಟಿಯನ್ನು ಹೊಂದಿರುವ ಹೊಸ ಸಲಹೆಯನ್ನು AIIMS ಬಿಡುಗಡೆ ಮಾಡಿದೆ. ಕಡೆನುಡಿ/Conclusion: AIIMSನ ಅಧಿಕೃತ ವೆಬ್ಸೈಟ್ನಲ್ಲಿ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಸಾಮಾನ್ಯ ನೆಗಡಿ, ಪ್ಲು ಮತ್ತು ವೈರಲ್ ಜ್ವರದ ಲಕ್ಷಣಗಳು ಕೋವಿಡ್-19ರ ಲಕ್ಷಣಗಳನ್ನು ಹೋಲಬಹುದು. ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ರೇಟಿಂಗ್: ದಾರಿತಪ್ಪಿಸುವ ಸುದ್ದಿ ಸತ್ಯ ಪರಿಶೀಲನೆ ವಿವರಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (AIIMS) ಕೋವಿಡ್-19 ಅನ್ನು ಪತ್ತೆಹಚ್ಚಲು […]
ಹೇಳಿಕೆ/Claim: : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್ನಲ್ಲಿ ಬಳಕೆದಾರರಿಂದ ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ […]
ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ […]