ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ಗಾಜಾ಼ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆ, ಹಮಾಸ್ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ, ಅನೇಕ ವೀಡಿಯೊಗಳು ಮತ್ತು ಚಿತ್ರಗಳು  ವಿವಿಧ ಹೇಳಿಕೆಗಳೊಂದಿಗೆ ಅಂತರ್ಜಾಲದಲ್ಲಿ ಪುಟಿದೆದ್ದಿವೆ. ವೈರಲ್ ಚಿತ್ರಗಳಲ್ಲೊಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೇನೆಗೆ ಸೇರಲು ಕಳುಹಿಸಿದ್ದಾರೆ ಎಂದು ಹೇಳಿಕೊಂಡಿದೆ. ಈ ವೈರಲ್ ಟ್ವೀಟ್ ಬೆಂಜಮಿನ್ ನೆತನ್ಯಾಹುರವರು ಒಬ್ಬ ಯುವಕನೊಂದಿಗೆ ಇರುವ ಚಿತ್ರವನ್ನು ತೋರಿಸುತ್ತದೆ. ಟ್ವೀಟ್‌ನಲ್ಲಿ, “ಎಂತಹ ನಾಯಕ. ನಿಜವಾದ ದೇಶಭಕ್ತಿ: ಬೆಂಜಮಿನ್ ನೆತನ್ಯಾಹು ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ರಾಷ್ಟ್ರೀಯ […]

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಪ್ಯಾಲೇಸ್ಟಿನಿನ ಮಿಲಿಟರಿ ಗುಂಪಾದ ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಲು ಮೋಟರೀಕೃತ ಪ್ಯಾರಾಗ್ಲೈಡರ್‌ಗಳನ್ನು ಬಳಸಿತು. ಆದರೆ, ಹಮಾಸ್‌ನ ನಿಜವಾದ ದಾಳಿಯನ್ನು ತೋರಿಸುತ್ತಿರುವುದಾಗಿ ಹೇಳುವ ದಾಳಿಗೆ ಸಂಬಂಧಿಸಿರದ ಇತರ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ ಪ್ಯಾರಾಗ್ಲೈಡರ್‌ಗಳು ಆಟದ ಮೈದಾನದಂತೆ ಕಾಣುತ್ತಿರುವ ಸ್ಥಳದೊಳಗೆ ಹಾರಿ ಬರುವುದನ್ನು  ಕಾಣಬಹುದು. ವೀಡಿಯೊದೊಂದಿಗಿನ ಹೇಳಿಕೆಯ ಪ್ರಕಾರ “ಹಮಾಸ್ ಭಯೋತ್ಪಾದಕರು ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿದರು, ಅಮಾಯಕ ನಾಗರಿಕರನ್ನು ಹತ್ಯೆಗೊಳಿಸಲು, ಮಹಿಳೆಯರು ಮತ್ತು ಮಕ್ಕಳನ್ನು ಅತ್ಯಾಚಾರಕ್ಕೊಳಗಾಗಿಸಿ ಕೊಲ್ಲಲು ಮನೆ-ಮನೆಗೆ ಹೋದರು.” […]

1982 ರ ಈ ಭಾರತೀಯ ಅಂಚೆ ಚೀಟಿಯು ಒಬ್ಬ ಮುಸ್ಲಿಂ ಕುಸ್ತಿಪಟು ಹಿಂದೂ ಕುಸ್ತಿಪಟುವನ್ನು ಹೊಡೆಯುತ್ತಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

1982 ರ ಈ ಭಾರತೀಯ ಅಂಚೆ ಚೀಟಿಯು ಒಬ್ಬ ಮುಸ್ಲಿಂ ಕುಸ್ತಿಪಟು ಹಿಂದೂ ಕುಸ್ತಿಪಟುವನ್ನು ಹೊಡೆಯುತ್ತಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

1982ರ ಭಾರತೀಯ ಅಂಚೆ ಚೀಟಿ ಎಂದು ಆರೋಪಿಸಲಾಗುತ್ತಿರುವ ಒಂದು ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಅಂಚೆ ಚೀಟಿಯಲ್ಲಿ ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯೊಂದಿಗೆ ಕುಸ್ತಿಯಾಡುತ್ತಿದ್ದು ಆ ಎರಡನೆಯ ವ್ಯಕ್ತಿಯನ್ನು ನೆಲದಿಂದ ಮೇಲೆತ್ತಿರುವುದನ್ನು ಕಾಣಬಹುದು. ಚಿತ್ರದ ಜೊತೆಗೆ ವೈರಲ್ ಆಗುತ್ತಿರುವ ಹೇಳಿಕೆಯ ಪ್ರಕಾರ ಈ ಅಂಚೆ ಚೀಟಿಯು ಮುಸ್ಲಿಂ ಕುಸ್ತಿಪಟುವೊಬ್ಬನು ಅಗ್ರ ಹಿಂದೂ ಪಟುವನ್ನು ಹೊಡೆಯುತ್ತಿರುವುದನ್ನು ಚಿತ್ರಿಸುತ್ತದೆ. ಹೇಳಿಕೆಯಲ್ಲಿರುವ ವಿಷಯ ಹೀಗಿದೆ: 1982ರಲ್ಲಿ ಏಷ್ಯನ್ ಕ್ರೀಡಾಕೂಟದ ಸಮಯದಲ್ಲಿ ಇಂದಿರಾ ಗಾಂಧಿ ಈ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. […]

ಕೌನ್ ಬನೇಗಾ ಕರೋರ್ಪತಿಯಲ್ಲಿ ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿಯಲ್ಲಿ  ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದ್ದು ಎನ್ನಲಾಗಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮಿತಾಭ್ ಬಚ್ಚನ್ ರವರು ಸ್ಪರ್ಧಿಗೆ ರೂ. 20,000ಕ್ಕೆ ಒಂದು ರಾಜಕೀಯ ಪ್ರಶ್ನೆ ಕೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಶ್ನೆ ಹೀಗಿದೆ, इनमें से किस मुख्यमंत्री को उनकी झूठी घोषना के करण घोषना मशीन कहा जाता है? [ಅನುವಾದ: ಇವರಲ್ಲಿ ಯಾವ ಮುಖ್ಯಮಂತ್ರಿಗಳನ್ನು ಅವರ ಸುಳ್ಳು ಘೋಷಣೆಗಳ ಕಾರಣದಿಂದಾಗಿ ಘೋಷಣಾ ಮಶೀನ್ ಎಂದು ಕರೆಯುತ್ತಾರೆ?] ಸ್ಪರ್ಧಿಗೆ ಕೊಡಲಾದ ಆಯ್ಕೆಗಳು […]

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. […]

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಭಾರತ ಮತ್ತು ಕೆನಡಾ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅನೇಕ ಹೇಳಿಕೆಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಈ ಗೊಂದಲದೆಡೆಯಲ್ಲಿ, ಕೆನಡಾದ ವಿರೋಧ ಪಕ್ಷದ ನಾಯಕರು ಕೆನಡಾದ ಪ್ರಧಾನಿ- ಜಸ್ಟಿನ್ ಟ್ರುಡೊರವರನ್ನು ಟೀಕಿಸುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ವಿರೋಧ ಪಕ್ಷದ ನಾಯಕರು ಭಾರತ-ಕೆನಡಾದ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡಿದ್ದಕ್ಕಾಗಿ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಕಾಣಬಹುದು. News: 🇨🇦 In the Canadian Parliament, Opposition Leader Scheer […]

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು […]

ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ […]

1 20 21 22