ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. […]